ಪಚ್ಚನಾಡಿ ತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.ಮಂಗಳೂರು ಮಹಾನಗರಪಾಲಿಕೆ...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆ...
ಮಹಾನಗರಪಾಲಿಕೆ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಡಿ.28 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ- ಶಿಕ್ಷಕರಿಗೆ ವಿಶೇಷ ಸನ್ಮಾನ ಹಾಗೂ ಕೌನ್ಸಲಿಂಗ್ : ಶಾಸಕ ಕಾಮತ್
ಮಂಗಳೂರು: ಮಂಗಳೂರಿನ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ ಮೊದಲಿಗೆ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರ ಮುತುವರ್ಜಿಯಲ್ಲಿ ಏರ್ಪಡಿಸಲಾಗಿದ್ದು ಇದೇ ಬರುವ 30ನೇ...
ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಮರುಜನ್ಮ ನೀಡಿದ ಸ್ನೇಹಾಲಯ
ಮ೦ಗಳೂರು: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಸ್ನೇಹಾಲಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸಿ ಆರೋಗ್ಯವ೦ತನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿಸಿದೆ. ಈ ಮೂಲಕ ಕ್ರಿಸ್ಮಸ್ ಹಬ್ಬದ ಸಂದರ್ಬದಲ್ಲಿ ಇಮ್ತಿಯಾಸ್ ಕುಟುಂಬಕ್ಕೆ ಸ್ನೇಹಾಲಯದ ಪ್ರೀತಿಯ ಉಡುಗೊರೆ ನೀಡಿದೆ.
2021ರ ಸೆಪ್ಟೆಂಬರ್ 15ರಂದು, ಇಮ್ತಿಯಾಸ್ ಎಂಬ 27 ವರ್ಷದ ವ್ಯಕ್ತಿಯನ್ನು ಸ್ನೇಹಾಲಯ ತಂಡವು ಮಂಜೇಶ್ವರದ ಬೀದಿಯಿಂದರಕ್ಷಿಸಿತು....
ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮ
ಮಂಜೇಶ್ವರ,: ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್ಮಸ್ ಕ್ಯಾರೋಲ್ಗಳಿಗೆ ಹೆಸರುವಾಸಿಯಾದ ತಂಡ ‘ಜಿಜಿ 100’ದಿಂದ ಮಧುರವಾದ...
ಕುಸೇಲ್ದರಸರೆ ನವೀನ್ ಡಿ ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ
ಮಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು...
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು..ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, "ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅವರು ಪ್ರಾರಂಭಿಸಿರುವ...
ಕೆನರಾ ಗ್ಲೋಬಲ್ ಅಲೂಮ್ನಿ ಮೀಟ್
ಮ೦ಗಳೂರು: ಕೆನರಾ ಶಿಕ್ಷಣ ಸಂಸ್ಥೆಯ ಗ್ಲೋಬಲ್ ಅಲೂಮ್ನಿ ಮೀಟ್ ಡಿಸೆಂಬರ್ 23 ಮತ್ತು 24 ರಂದು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿ ನಡೆಯಲಿದೆ. ಡಿಸೆಂಬರ್ 23 ಮತ್ತು 24 ರಂದು ಎರಡು ದಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಎಕ್ಸಪೋ (ವಸ್ತು ಪ್ರದರ್ಶನ ಮತ್ತು ಮಾರಾಟ ) ನಡೆಯಲಿದೆ. ಅಲ್ಲಿ 25 ಸ್ಟಾಲ್ ಗಳಲ್ಲಿ...
ಡಿ.28ರಂದು ರೈತರ ವಿಚಾರ ವಿಮರ್ಶೆ ಕಾರ್ಯಕ್ರಮ
ಮಂಗಳೂರು: ಮಂಗಳೂರು, ಉಳ್ಳಾಲ, ಮುಲ್ಕಿ ಹಾಗೂ ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿನ ಆಸಕ್ತ ರೈತರಿಗೆ ಅಥವಾ ಫಲಾಪೇಕ್ಷಿಗಳಿಗೆ “ಜಲಸಂರಕ್ಷಣೆಯ ಮಹತ್ವ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳ“ ಬಗ್ಗೆ ವಿಚಾರ ವಿಮರ್ಶೆ ಕಾರ್ಯಕ್ರಮವನ್ನು ನಗರದ ಬೆಂದೂರುವೆಲ್ಕ್ರಾಸ್ ಸಮೀಪವಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಿಜ್ಞಾನಿಗಳು, ಅPಅಖI...






