ವಗ್ಗ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು
ಬಂಟ್ವಾಳ: ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನುಪೊಲೀಸರು ಬ೦ಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ
ಗ್ರಾಮದ ರಾಕೇಶ್ ಎಲ್. ಪಿಂಟೋ...
ಸುಳ್ಯ :ಮಂಗಳವಾರ ಜಿಲ್ಲಾ ಮಟ್ಟದ ಜನತಾದರ್ಶನ
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ.ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ...
ಶಾಸಕ ವೇದವ್ಯಾಸ್ ಕಾಮತ್ ಅವರಿ೦ದ ಉರುಳು ಸೇವೆಯ ಸಂಕಲ್ಪ ಈಡೇರಿಕೆ
ಮ೦ಗಳೂರು: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದಂತಹ ಕಾಲದಲ್ಲಿ, "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ಸಂದರ್ಭದಲ್ಲಿ ತಮ್ಮ ಸಂಕಲ್ಪವನ್ನು ಈಡೇರಿಸಿಕೊಂಡರು.
ಕ್ಷೇತ್ರದ ಶಾಸಕನಾಗಿರುವಂತಹ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು...
ಜ.22:ಶ್ರೀರಾಮ ವೈಭವ -ಸಂಗೀತ ಕಾರ್ಯಕ್ರಮ
ಮಂಗಳೂರು:ಕಲಾಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಜ.22ರಂದು 10ಗಂಟೆಗೆ ನಡೆಯಲಿರುವ ಶ್ರೀರಾಮ ವೈಭವ ಸಂಗೀತ ಕಾರ್ಯಕ್ರಮ ವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಲಿದ್ದಾರೆ.ಶಕ್ತಿ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಕೆ.ಸಿ.ನಾಯಕ್ ಸಮಾರಂಭ ದ ಅಧ್ಯಕ್ಷತೆ ವಹಿಸಲಿದ್ದಾರೆ.ಬಳಿಕ ಶ್ರೀಮತಿ ವಿಭಾ ನಾಯಕ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ...
ಫೆ.10ರಂದು ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಡೆಯುವ 5ನೇ ಹಾಗೂ ಸುಳ್ಯ ತಾಲೂಕಿನಲ್ಲಿ ನಡೆಯುವ ಎರಡನೇ ಗ್ರಾಮ...
ಮ೦ಗಳೂರು: ನಗರದ ವಿವಿದೆಡೆ ಪೊಲೀಸ್ ಪಥಸ೦ಚಲನ
ಮ೦ಗಳೂರು:ಜ.22 ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು
ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು
ಕೈಗೊಳ್ಳಲಾಗಿದೆ.9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ರವಿವಾರ ನಗರದ ವಿವಿದೆಡೆ ಪೊಲೀಸ್ ಪಥಸ೦ಚಲನ ನಡೆಸಲಾಯಿತು.
ಎಂ.ಸಿ.ಸಿ. ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ
ಮಂಗಳೂರು: 1912 ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹತ್ತು ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಮ್.ಸಿ.ಸಿ. ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಅಭಿವೃದ್ದಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಬ್ಯಾಂಕಿನ ಪ್ರಸ್ತುತ ಆಧ್ಯಕ್ಷ ಅನಿಲ್ ಲೋಬೊ ನ್ಟೇತೃತ್ವದ ಆಡಳಿತ...
ಇಸ್ಪೀಟ್ ಅಡ್ಡೆಗೆ ದಾಳಿ:1.75 ಲಕ್ಷ ರೂ. ವಶ;29 ಮ೦ದಿಯ ಬ೦ಧನ
ಮಂಗಳೂರು :ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟ ಆಡುತ್ತಿದ್ದ 29 ಮ೦ದಿಯನ್ನು ಬ೦ಧಿಸಿ 1.75 ಲಕ್ಷ ರೂ. ವಶ ಪಡಿಸಿಕೊ೦ಡಿದ್ದಾರೆ.ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟ ಆಡುತ್ತಿದ್ದಾರೆಂದು ಬಂದ...
ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ
ಬಂಟ್ವಾಳ :ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ, ಮಾತನಾಡಿದರು.ಸಂವಿಧಾನ ಜಾಥಾ ಮೂಲಕ...
ಶ್ರೀರಾಮ ಪ್ರಾಣಪ್ರತಿಷ್ಠೆ ಮಹೋತ್ಸವ:ಶಾಸಕ ವೇದವ್ಯಾಸ್ ಕಾಮತ್ ಮನವಿ
ಮ೦ಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೋಮವಾರ ರಾಮ ಪ್ರಾಣಪ್ರತಿಷ್ಠೆ ಮಹೋತ್ಸವದ ನಡೆಯಲಿದ್ದು ಇಡೀ ದೇಶದ ತುಂಬೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಹಿಂದೂಗಳು ಕುಟುಂಬ ಸಮೇತ ತಮ್ಮ ತಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು.
ಇದು ಭಾರತದ...






