ಯುವನಿಧಿ : ಜ.8-9ರಂದು ನೋಂದಣಿ ಮೇಳ
ಮಂಗಳೂರು: ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ...
ಪಿಎಂ ಜನಮನ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕುಮಾರ್ ತಿಳಿಸಿದ್ದಾರೆ.ಅವರು ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ...
ಅನಧಿಕೃತ ಮರಳುಗಾರಿಕೆ: ದೂರು ನೀಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಗೆಯ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಅನಧಿಕೃತ ಮರಳುಗಾರಿಕೆಗೆ ಸಂಬಂಧಿಸಿದಂತೆ, ಯಾವುದೇ ದೂರು ನೀಡಬೇಕಾದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932 ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾದಕ ವಸ್ತು ಎ೦ಡಿಎ೦ಎ ಮಾರಾಟ :ಇಬ್ಬರು ಕುಖ್ಯಾತ ಆರೋಪಿಗಳ ಬ೦ಧನ
ಮಂಗಳೂರು :ಮಾದಕ ವಸ್ತುವಾದ ಎ೦ಡಿಎ೦ಎ(MDMA ) ಮಾರಾಟ ಮಾಡುತ್ತಿ ಇಬ್ಬರು ಕುಖ್ಯಾತ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬ೦ಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳದಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27)ಹಾಗೂ ಉಮರ್ ಫಾರೂಕ್ ಇರ್ಫಾನ್ (26) ಬ೦ಧಿತ ಆರೋಪಿಗಳು.ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಪ್ಪು ಬಣ್ಣದ ಹೊಂಡ...
ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು:2023-24ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಜನವರಿ...
ಬ್ಯಾಂಕ್ ಆಫ್ ಬರೋಡ ವತಿಯಿಂದ ಹಸಿರು ಪರಿಸರದ ಕಡೆ ನಮ್ಮ ನಡೆ ಕಾರ್ಯಕ್ರಮ
ಮ೦ಗಳೂರು: ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಒಫ್ ಬರೋಡ ವತಿಯಿಂದ ಗಿಡಗಳ ನೆಡುವಿಕೆ ಹಾಗೂಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಬ್ಯಾಂಕ್ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ. ಆರ್ ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ...
ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸು ಅಪಘಾತ : ಹಲವರಿಗೆ ಗಾಯ
ಮಂಗಳೂರು: ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಉರುಳಿ ಹಲವು ಮ೦ದಿ ಪ್ರಯಾಣಿಕರು ಗಾಯಗೊ೦ಡ ಘಟನೆ ಮ೦ಗಳವಾರ ಸ೦ಜೆ ಸ೦ಭವಿಸಿದೆ.ಕಿನ್ನಿಗೋಳಿಯಿ೦ದ ಬಿ ಸಿ ರೋಡ್ ಕಡೆಗೆ ಬಸ್ಸು ತೆರಳುತ್ತಿತ್ತು. ಬಸ್ಸು ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ತಿರುವಿನಲ್ಲಿ ಸುಮಾರು ೬.೩೫ ರ ವೇಳೆಗೆ ಸಾಗುತ್ತಿದ್ದಾಗ ಬ್ರೇಕ್ ಫೈಲ್ಆಗಿ ಚಾಲಕನ ನಿಯಂತ್ರಣ...
ಮರಳು ಪೂರೈಕೆಗೆ ಆ್ಯಪ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ.ಜನವರಿ 2 ರಿಂದ ಸಾರ್ವಜನಿಕರು ಈ ಆ್ಯಪ್ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು...
ಪಿಯುಸಿ ಆದವರಿಗೆ ಉದ್ಯೋಗ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು,:ಹೆಚ್.ಸಿ.ಎಲ್ ಟೆಕ್ನಾಲೋಜಿಸ್ ವತಿಯಿಂದ 2022, 2023ರಲ್ಲಿ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 2024ರಲ್ಲಿ ಉತ್ತೀರ್ಣರಾಗುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ TECH BEEತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ 12 ತಿಂಗಳ ತರಬೇತಿ ನೀಡಲಾಗುತ್ತಿದ್ದು, ಆರು ತಿಂಗಳ ಇಂಟರ್ನ್ಶಿಪ್ ಸಮಯದಲ್ಲಿ ತಿಂಗಳಿಗೆ ರೂ. 10,000 ಸ್ಟೈಫಂಡ್ ನೀಡಲಾಗುತ್ತದೆ....



