ಕಣ್ಣೂರು: 750 ಮೆ.ಟನ್ಅನಧಿಕೃತ ಮರಳು ದಾಸ್ತಾನು ವಶ

0
ಮಂಗಳೂರು: ಮಂಗಳೂರು ತಾಲ್ಲೂಕು ಕಣ್ಣೂರು ಗ್ರಾಮದ ಬಡ್ಲ ಗುತ್ತು ಎಂಬಲ್ಲಿ ಅನಧಿಕೃತವಾಗಿ ಸಾಮಾನ್ಯ ಮರಳನ್ನು ದಾಸ್ತಾನು ಮಾಡಿರುತ್ತಾರೆ ಎಂಬ ಮಾಹಿತಿಯಂತೆ ಡಿ.27ರಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ, ಹಿರಿಯ ಭೂವಿಜ್ಞಾನಿ ಕೆ.ಎಂ ನಾಗಭೂಷಣ್ ಹಾಗೂ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು...

ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು:ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.ಈ ತರಬೇತಿ ಪಡೆದುಕೊಳ್ಳಲು ಆಸಕ್ತಿಯುಳ್ಳವರು ಉಪ ಪೊಲೀಸ್ ಆಯುಕ್ತರ ಕಚೇರಿ, ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಕಚೇರಿಯಲ್ಲಿ ನಿಗದಿತ ಅರ್ಜಿಯನ್ನು ಪಡೆದು 3 ಪಾಸ್ ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಜನವರಿ 10ರೊಳಗೆ...

ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳ ಕಳವು

0
ಉಪ್ಪಿನಂಗಡಿ: ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.ಬೆದ್ರೋಡಿಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಕನ್ಸಟ್ರಕ್ಷನ್ ನಡೆಯುತ್ತಿದ್ದು, ಡ್ಯಾಂನ ತಡೆಗೋಡೆಗೆ ಅಳವಡಿಸಿದ 60 ಸೆಂಟ್ರಿಂಗ್ ಶೀಟುಗಳ ಪೈಕಿ 39 ಸೆಂಟ್ರಿಂಗ್ ಶೀಟುಗಳನ್ನು ಡಿ.23 ರ ರಾತ್ರಿಯಿಂದ ಡಿ. 24ರ ಬೆಳಿಗ್ಗಿನ ಅವಧಿಯಲ್ಲಿಕಳ್ಳರು ಕಳವು ಮಾಡಿಕೊಂಡು...

ಬಿ.ಸಿ ರೋಡು: ಹೋಟೆಲ್ ನ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು

0
ಬಂಟ್ವಾಳ : ಬಿ.ಸಿ .ರೋಡು ಮುಖ್ಯ ರಸ್ತೆಯಲ್ಲಿರುವ ಹೊಟೇಲ್ ವೊ೦ದರ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿ. 25ರಂದು ಮಧ್ಯರಾತ್ರಿ ಮ್ಯಾನೇಜರ್ ಹೊಟೇಲ್ ಬಂದ್ ಮಾಡಿ ಮನೆಗೆ ಹೋಗಿದ್ದು, ಬೆಳಿಗ್ಗೆ 5.30 ಗಂಟೆಯ ವೇಳೆಗೆ ಹೊಟೇಲ್ ನಲ್ಲಿ ಬೆಳಿಗ್ಗೆ ಕೆಲಸ ಮಾಡುವ ಸಿಬ್ಬ೦ದಿ...

ಪಚ್ಚನಾಡಿ ತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ

0
ಮಂಗಳೂರು: ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.ಮಂಗಳೂರು ಮಹಾನಗರಪಾಲಿಕೆ...

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.

0
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆ...

ಮಹಾನಗರಪಾಲಿಕೆ ಫೋನ್ ಇನ್ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಡಿ.28 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ- ಶಿಕ್ಷಕರಿಗೆ ವಿಶೇಷ ಸನ್ಮಾನ ಹಾಗೂ ಕೌನ್ಸಲಿಂಗ್ : ಶಾಸಕ ಕಾಮತ್

0
ಮಂಗಳೂರು: ಮಂಗಳೂರಿನ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ ಮೊದಲಿಗೆ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರ ಮುತುವರ್ಜಿಯಲ್ಲಿ ಏರ್ಪಡಿಸಲಾಗಿದ್ದು ಇದೇ ಬರುವ 30ನೇ...

ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಮರುಜನ್ಮ ನೀಡಿದ ಸ್ನೇಹಾಲಯ

0
ಮ೦ಗಳೂರು: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಸ್ನೇಹಾಲಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸಿ ಆರೋಗ್ಯವ೦ತನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿಸಿದೆ. ಈ ಮೂಲಕ ಕ್ರಿಸ್ಮಸ್ ಹಬ್ಬದ ಸಂದರ್ಬದಲ್ಲಿ ಇಮ್ತಿಯಾಸ್ ಕುಟುಂಬಕ್ಕೆ ಸ್ನೇಹಾಲಯದ ಪ್ರೀತಿಯ ಉಡುಗೊರೆ ನೀಡಿದೆ. 2021ರ ಸೆಪ್ಟೆಂಬರ್ 15ರಂದು, ಇಮ್ತಿಯಾಸ್ ಎಂಬ 27 ವರ್ಷದ ವ್ಯಕ್ತಿಯನ್ನು ಸ್ನೇಹಾಲಯ ತಂಡವು ಮಂಜೇಶ್ವರದ ಬೀದಿಯಿಂದರಕ್ಷಿಸಿತು....

ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಕ್ರಿಸ್‌ಮಸ್ ಹಬ್ಬದ ಸಂಭ್ರಮ

0
ಮಂಜೇಶ್ವರ,: ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ತನ್ನ ನಿವಾಸಿಗಳಿಗೆ ಕ್ರಿಸ್‌ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್‌ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್‌ಮಸ್ ಕ್ಯಾರೋಲ್‌ಗಳಿಗೆ ಹೆಸರುವಾಸಿಯಾದ ತಂಡ ‘ಜಿಜಿ 100’ದಿಂದ ಮಧುರವಾದ...