ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಭೆ

0
ಮಂಗಳೂರು: ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿರುವ ಸೌಪರ್ಣಕ ಸಭಾಂಗಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ಸಭೆಯಲ್ಲಿ, ರೈಲ್ವೆ ಲೈನ್ ಹಾದು ಹೋಗುವ ಕೊಂಗೂರು ಮಠದ ರಸ್ತೆ, ಅತ್ತಾವರದ ಸೈಕಲ್ ಟ್ರ್ಯಾಕ್ ರಸ್ತೆ, ಸಿಲ್ವರ್ ಗೇಟ್ ರಸ್ತೆ, ಅಳಪೆ ಮಠ, ಸೂರ್ಯ ನಗರ, ನೂಜಿ, ಹೊಯ್ಗೆ ಬಜಾರ್, ಮಹಾಕಾಳಿ ಪಡ್ಪು, ಆದರ್ಶ ನಗರ, ಬೋಳಾರ, ಹಾಗೂ...

ಹತಾಶ ಜಗತ್ತಿನಲ್ಲಿ ಭರವಸೆಯನ್ನು ಬಿತ್ತೋಣ:ಬಿಷಪ್‌

0
ಮ೦ಗಳೂರು:ಜಗತ್ತಿನಲ್ಲಿ ದ್ವೇಷ,ಧಮ೯ ಹಾಗೂ ಜಾತಿ ಆಧಾರಿತ ತಾರತಮ್ಯ ಮತ್ತು ಹಿ೦ಸೆ ತಾ೦ಡವಾಡುತ್ತಿರುವುದನ್ನು ದಿನನಿತ್ಯವೂ ಕಾಣುತ್ತೇವೆ. ಯುದ್ಧ, ಸಾವು ನೋವು ಹಾಗೂ ವಿನಾಶದ ದುರ್ಘಟನೆಗಳು ಪ್ರಮುಖ ವಾರ್ತೆಗಳಾಗಿ ಹೊರಹೊಮ್ಮುತ್ತಿವೆ. ಪೋಪ್ ಪ್ರಾನ್ಸಿಸ್ ಅವರ ಮಾತುಗಳಲ್ಲಿ ಹೇಳುದಾದರೆ ನಾವು ಮೂರನೇ ಜಾಗತಿಕ ಮಹಾಯುದ್ಧದಲ್ಲಿ ಸದ್ದಿಲ್ಲದೆ ಮುನ್ನಡೆಯುತ್ತಿದ್ದೇವೆ. ಹತಾಶೆ ಹಾಗೂ ಆತ್ಮಹತ್ಯೆಗಳು ಏರಿಕೆಯಾಗುತ್ತಿವೆ. ನಾವೆಲ್ಲರೂ ನಿರಾಶಾದಾಯಕ ವಿಶ್ವದೆಡೆಗೆ ಮುಖ...

ಅಧಿಕಾರ ಸ್ವೀಕಾರ

0
ಮಂಗಳೂರು: ದಕ್ಷಿಣ ಕನ್ನಡ ಕೌಶಲ್ಯಾಭಿವೃದಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅವರನ್ನು ನೇಮಿಸಲು ಆದೇಶಿಸಲಾಗಿದೆ.‌ ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ

0
ಡಿ. 22ರಂದು ಶುಕ್ರವಾರ ಬೆಳಿಗ್ಗೆ 9.40ಕ್ಕೆ - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 10.15 - ಹಳೆಯಂಗಡಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, 10.45 - ನಿರ್ಮಾಣ ಹಂತದಲ್ಲಿರುವ ಮುಲ್ಕಿ ಪ್ರವಾಸಿ ಮಂದಿರದ ಸ್ಥಳ ಪರಿಶೀಲನೆ, 11 ಗಂಟೆಗೆ - ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ, 11.15 - ನಿರ್ಮಾಣ ಹಂತದಲ್ಲಿರುವ...

ಕ್ರಿಕೆಟ್’ ಪಂದ್ಯಾವಳಿ’ಪೋಸ್ಟರ್ ಬಿಡುಗಡೆ

0
ಮಂಗಳೂರು: ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಈ...

ರವಿರಾಜ ಪನೆಯಾಲಗೆ “ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ

ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ" ಪ್ರಶಸ್ತಿ ಪ್ರದಾನ ಮಾಡಲಾಯಿತು.ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು...

ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ

0
ಮಂಗಳೂರು : ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯಕಾಲೇಜು ರಸ ಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ...

ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ: ಎಂಟು ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಣೆ : ಡಾ.ಎಂ.ಬಿ. ಪುರಾಣಿಕ್

0
ಮಂಗಳೂರು: "2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದಲ್ಲಿ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ನೆಲ ಅಂತಸ್ತಿನ ಗರ್ಭಗುಡಿಯಲ್ಲಿ ಬಾಲರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಮನೆಮನೆಗಳಿಗೆ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ವಿತರಿಸುವ ಅಭಿಯಾನವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ,ಉಡುಪಿ, ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಮಂಗಳೂರು ವಿಭಾಗದಲ್ಲಿ...

ಕೊಂಕಣಿಯ ‘ಅಸ್ಮಿತಾಯ್’ ಬರೆಯಲಿದೆ 100 ದಿನದ ದಾಖಲೆ

ಮ೦ಗಳೂರು: ಮಾಂಡ್ ಸೊಭಾಣ್ ನಿರ್ಮಾಣದ 'ಅಸ್ಮಿತಾಯ್' ಕೊಂಕಣಿ ಚಲನಚಿತ್ರವು 100 ನೇ ದಿನದ ಮೈಲಿಗಲ್ಲನ್ನು ಡಿ.23ರಂದು ದಾಟಲಿದೆ. ಅಂದು ಬಿಜೈ ಭಾರತ್ ಸಿನೆಮಾದಲ್ಲಿ ಸಂಜೆ 4 ಗಂಟೆಗೆ ಶತದಿನಾಚರಣೆ ನಡೆಯಲಿದೆ. ಕರ್ನಾಟಕದ ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದುವರೆಗೆ ಶತದಿನ ಪೂರೈಸಿದ ಪ್ರಥಮ ಸಿನೆಮಾ ಎಂದು ಅಸ್ಮಿತಾಯ್ ದಾಖಲೆ ಬರೆಯಲಿದೆ. ಮುಂಬಯಿಯ ಉದ್ಯಮಿ ಹಾಗೂ ಶಿಕ್ಷಣ...

ವಿಶ್ವದ ಬಂಟರೆಲ್ಲರನ್ನು ಒಂದೆಡೆ ಸೇರಿಸಿದ ತೃಪ್ತಿ ಇದೆ: ಐಕಳ ಹರೀಶ್ ಶೆಟ್ಟಿ

0
ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ 2023 ಇದರ ಖರ್ಚು ವೆಚ್ಚಗಳ ಕುರಿತು ಮುಲ್ಕಿಯಲ್ಲಿರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವಿಶ್ವದ...