ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೆಪ್ಟೆಂಬರ್ 25 ರಿಂದ 27 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆವಹಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಭಾಷೆಮತ್ತು ಸಾಹಿತ್ಯ ಭವನಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.ಜಿಲ್ಲೆಯಲ್ಲಿ ತುಳು ಭವನದ ಹಲವು ಕಾಮಗಾರಿ ಬಾಕಿ ಇರುತ್ತದೆ. ಕೊಂಕಣಿ ಭವನದ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಬ್ಯಾರಿ ಭವನಕ್ಕೆ...
ನಕಲಿ ವೈನ್ ತಯಾರಿ ಅಡ್ಡೆಗೆ ದಾಳಿ: ನಕಲಿ ವೈನ್ ವಶ
ಮ೦ಗಳೂರು: ನಗರದ ಕದ್ರಿ, ಲೋಬೊ ಲೇನ್ ಎಂಬಲ್ಲಿ ಮನೆಯೊ೦ದರಲ್ಲಿ ಕಾಯಾ೯ಚರಿಸುತ್ತಿದ್ದ ನಕಲಿ ವೈನ್ ತಯಾರಿ ಅಡ್ಡೆಗೆ ಮೇಲೆ ದಾಳಿ ನಡೆಸಿರುವ ಅಬಕಾರಿ ದಳ 238.500 ಲೀಟರ್ ನಕಲಿ ವೈನ್ ಹಾಗೂ1,500 ಲೀಟರ್ ವೈನ್ ತಯಾರಿಸುವ ಕೊಳೆಯನ್ನು ವಶಪಡಿಸಿಕೊ೦ಡಿದ್ದಾರೆ. ಆರೋಪಿ ಮೈಕಲ್, ಬ್ಲೈಸ್ ಮಿನೀಜಸ್ ಎಂಬುವನನ್ನು ಬ೦ಧಿಸಲಾಗಿದೆ.
ಆರೋಪಿಯ ಮನೆಯಿ೦ದ 3.180 ಲೀಟರ್ ಮದ್ಯ ಹಾಗೂ ನಕಲಿ...
ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ: ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ಪಾರಂಪರಿಕ ವೈದ್ಯ ಪದ್ಧತಿಯಾಗಿರುವ ಆಯುರ್ವೇದ ವಿಶ್ವಕ್ಕೆ ಭಾರತೀಯರ ದೊಡ್ಡ ಕೊಡುಗೆಯಾಗಿದ್ದು, ಈ ಪದ್ಧತಿಯನ್ನು ಉಳಿಸಬೇಕಾದ ಜವಾಬ್ದಾರಿ ಆಯುರ್ವೇದ ಪದ್ಧತಿ ಕಲಿಯುವ ವಿದ್ಯಾರ್ಥಿಗಳದ್ದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ವೆನ್ಲಾಕ್ ಆಸ್ಪತ್ರೆ ಆವರಣದ ಆಯುಷ್ ಆಸ್ಪತ್ರೆಯಲ್ಲಿ ಮಂಗಳವಾರ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾ ವಿದ್ಯಾಲಯಗಳ...
ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ
ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೆಪ್ಟೆಂಬರ್ 24 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ಅಂದು ಬೆಳಿಗ್ಗೆ 10:05- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:30 - ನಗರದ ಟಿಎಂಎ ಫೈ ಕನ್ವೆಂಷನ್ ಸೆಂಟರ್ನಲ್ಲಿ ಮಂಗಳೂರು ಟೆಕ್ನೋವಂಜಾ 2025- ಕಾರ್ಯಕ್ರಮ,. ಮಧ್ಯಾಹ್ನ 12...
ಫಿಶ್ ಕಟ್ಟಿಂಗ್ ಕಾರ್ಖಾನೆಗೆ ದಾಳಿ: 10 ಬಾಲ ಕಾರ್ಮಿಕರು ಪತ್ತೆ
ಮಂಗಳೂರು: ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಿಶ್ ಕಟ್ಟಿಂಗ್ ಯೂನಿಟ್ ಸಂಸ್ಥೆಗೆ ದಾಳಿ ನಡೆಸಿ, 10 ಬಾಲಕಾರ್ಮಿಕ/ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ.ಸಾರ್ವಜನಿಕರ ದೂರಿನ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ಮಕ್ಕಳು ಬಿಹಾರ ಮತ್ತು ನೇಪಾಳ ಮೂಲದವರಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತೆ...
ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ – ಜಿಲ್ಲಾ ಆರೋಗ್ಯಾಧಿಕಾರಿ
ಮಂಗಳೂರು: ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಸ್ಕ್ಯಾನಿಂಗ್ ನಡೆಸಲು ರೋಗಿಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಾಗಿದ್ದು ತಪ್ಪಿದ್ದಲ್ಲಿ ಅಂತಹ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.ಅವರು ಮಂಗಳವಾರ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ...
ಕುಡ್ಲದ ಪಿಲಿಪರ್ಬ: ಚಪ್ಪರ ಮುಹೂರ್ತ
ಮ೦ಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ "ಕುಡ್ಲದ ಪಿಲಿ ಪರ್ಬ-2025" ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು "ದಸರಾ ಸಂದರ್ಭದಲ್ಲಿ ಇಡೀ...
ಮುಂಬೈನಿಂದ ಮಾದಕ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ :ಆರೋಪಿಗಳ ಬಂಧನ
ಮ೦ಗಳೂರು: ಮುಂಬೈನಿಂದ ಮಾದಕ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಮಂಗಳೂರು ನಗರದ ಸಿಸಿಬಿ ಘಟಕದ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಆರೋಪಿಗಳನ್ನು ಬ೦ಧಿಸಿದ್ದಾರೆ.ಆರೋಪಿಗಳಿಂದ 22,30,000 ರೂ. ಮೌಲ್ಯದ 111.83 ಗ್ರಾಂ ಎಂಡಿಎಂಎ ಮತ್ತು 1,90.000 ರೂ. ಮೌಲ್ಯದ 21.03 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ.
ಚಿರಾಗ್ ಸನಿಲ್,...
ಅಪೌಷ್ಟಿಕತೆಯ ನಿವಾರಣೆಯ ಬಗ್ಗೆ ಅರಿವು ಮೂಡಿಸಬೇಕು – ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಜಿಲ್ಲೆಯಾದ್ಯಂತ ಪೋಷಣ ಅಭಿಯಾನ ನಡೆಯುತ್ತಿದ್ದು, ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಮತ್ತು ಆರೋಗ್ಯವಂತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.ಅವರು ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು...





