ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪೆÇ್ರೀಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ...

ಆ.6 : ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ‘ಸುವರ್ಣ ಸಂಭ್ರಮ’

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಸುವರ್ಣ ಮಹೋತ್ಸವ ಕಾರ್ಯಕ್ರಮ ಆ.6ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ಬೆ.9ಕ್ಕೆ ಉದ್ಘಾಟನಾ ಕಾರ್ಯಕ್ರಮ ಶಾಸಕ ವೇದವ್ಯಾಸ ಕಾಮತ್ ರ ಅಧ್ಯಕ್ಷತೆ ಯಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ...

ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಕ್ಕೆ 75 ಲಕ್ಷ ರೂ. : ಶಾಸಕ ಕಾಮತ್

0
ಮಂಗಳೂರು: ನಗರದ ನೆಹರು ಮೈದಾನದ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು 75 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ.ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್‍ಬಾಲ್ ಪಂದ್ಯಾಟವನ್ನು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ...

ಮಧ್ಯಸ್ಥಿಕೆ ಅಭಿಯಾನ- ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶ

0
ಮಂಗಳೂರು: “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈನಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 7 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು...

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

0
ಮಂಗಳೂರು: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3 ರ೦ದು ಉದ್ಘಾಟಿಸಿತು.ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು...

ರೆಮೋನಾ ಎವೆಟ್ ಪಿರೇರಾಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಸನ್ಮಾನ

0
ಮಂಗಳೂರು: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ.ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ...

ಬಿಜೆಪಿ ವತಿಯಿಂದ ಆಟಿದ ಐಸಿರ

0
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್...

ವ್ಯಸನ ಮುಕ್ತ ಸಮಾಜ ನಿರ್ಮಿಸಲು ಯುವಕರ ಸಹಕಾರ ಅಗತ್ಯ”

0
ಮಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಯುವಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವ್ಯಸನಗಳಿಗೆ ಆಕರ್ಷಣೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಸನ ಮುಕ್ತ ದಿನದ ಆಚರಣೆಯು ಯುವಜನರಲ್ಲಿ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್ ಹೇಳಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು...

ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆ

0
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ...

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

0
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ...