ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿ : ಇಬ್ಬರ ಬ೦ಧನ
ಮ೦ಗಳೂರು: ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿ ಅಕ್ರಮ ಮದ್ಯ ತಯಾರಿಸುತ್ತಿದ್ದ ಮನೆಯೊ೦ದಕ್ಕೆ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬ೦ಧಿಸಿದ್ದಾರೆ. ಸ್ಥಳದಿ೦ದ ಅಕ್ರಮ ಮದ್ಯ ಮತ್ತು ತಯಾರಿಕಾ ಯಂತ್ರೋಪಕರಣಗಳು, ಮದ್ಯ ಬಾಟ್ಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಣವ್ ಪಿ. ಶೆಣೈ (24) ಹಾಗೂ ಅನೂಷ್ ಆರ್. (24) ಬ೦ಧಿತ ಆರೋಪಿಗಳು.
ಬಾಡಿಗೆ ಮನೆ ಅಕ್ರಮ ತಯಾರಿ ನಡೆಯುತ್ತಿರುವ...
ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು : ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು, ವಿಶ್ವಕರ್ಮ ಸಹಕಾರ ಬ್ಯಾಂಕ್ ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಕೆಎಂಸಿ ಆಸ್ಪತ್ರೆ ಮತ್ತು ಕೆಎಸ್ ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಭಾನುವಾರ ಮಂಗಳಾದೇವಿಯ ರಾಮಕೃಷ್ಣ ಆಶ್ರಮದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು...
ಜುಗಾರಿ ಆಟವಾಡುತ್ತಿದ್ದ 17 ಮ೦ದಿ ವಿರುದ್ದ ಪ್ರಕರಣ ದಾಖಲು
ಮ೦ಗಳೂರು: ಮಂಗಳೂರು ತಾಲೂಕು ಬೊಲ್ಪುಗುಡ್ಡೆ ಗ್ರಾಮದ ಮನೆಯೊ೦ದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ (ಉಲಾಯಿ ಪಿದಾಯಿ) ಎಂಬ ಜುಗಾರಿ ಆಟವಾಡುತ್ತಿದ್ದ17 ಮ೦ದಿ ವಿರುದ್ದ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊ೦ಡಿದ್ದಾರೆ. 1,92,000 ರೂ ನಗದು ಹಣ ಹಾಗೂ 8 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ: 30-08-2025 ರಂದು ರಾತ್ರಿ 11-30 ಗಂಟೆಯ ಸಮಯ ಬೊಲ್ಪುಗುಡ್ಡೆಯಲ್ಲಿ ಮನೆಯೊ೦ದರಲ್ಲಿ...
ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಮಂಗಳೂರು; ಮೇಜರ್ ಧ್ಯಾನ್ಚಂದ್ ಹಾಕಿ ಮಾಂತ್ರಿಕ ಇವರ ಜನ್ಮ ದಿನದ ಪ್ರಯುಕ್ತ ಮಂಗಳಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಯಿತು.ಕಾರ್ಯಕ್ರಮವನ್ನು ಕಾಮನ್ವೆಲ್ತ್ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ಪುಷ್ಪರಾಜ್ ಹೆಗಡೆ ಉದ್ಘಾಟಿಸಿದರು. ಅವರು ಮಾತನಾಡಿ, ಮೇಜರ್ ಧ್ಯಾನ್ಚಂದ್ ಅವರು ಹಾಕಿ ಕ್ರೀಡೆಯಲ್ಲಿ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ, ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಲು ಶಿಸ್ತು...
ನೋಂದಣಿ ಮತ್ತು ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲ್ಲೈ ಮುಗಿಲನ್...
ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
ಮ೦ಗಳೂರು: ಬೆಳ್ತಂಗಡಿ ಉಜಿರೆಯ ವಸತಿಗೃಹವೊ೦ದರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ದಿನಾಂಕ:1-3-2014 ರಂದು ಮದ್ಯಾಹ್ನ ವೇಳೆ, ಪ್ರಕರಣ ಆರೊಪಿ , ಚಿಕ್ಕಮಗಳೂರಿನ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತ ಓವ೯ ಮಹಿಳೆಯೊಂದಿಗೆ ಬಂದು ವಸತಿಗೃಹದಲ್ಲಿ ರೂಂ ಪಡೆದುಕೊಂಡಿದ್ದ. ಆ ದಿನ ರಾತ್ರಿ ವೇಳೆ ಸದ್ರಿ...
ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ
ಮಂಗಳೂರು: ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಸೆಪ್ಟೆಂಬರ್ 13 ರ ಸಂಬಂಧ ಆದೇಶಿಸಲಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ...
ತಲಪಾಡಿ ಅಪಘಾತ: ಬಸ್ ಬ್ರೇಕ್ಫೇಲ್ ಸಂಭವಿಸಿಲ್ಲ – ಕೆ.ಎಸ್.ಆರ್.ಟಿ.ಸಿ ಸ್ಪಷ್ಟನೆ
ಮಂಗಳೂರು: ಗುರುವಾರ ತಲಪಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್- ರಿಕ್ಷಾ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಬಸ್ ಬ್ರೇಕ್ ಫೇಲ್ ಆಗಿರುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಸ್ಪಷ್ಟಪಡಿಸಿದೆ.ಆಗಸ್ಟ್ 28 ರಂದು ಮಂಗಳೂರು-1ನೇ ಘಟಕದ ಕೆಎ 19 ಎಫ್ 3407 ಸಂಖ್ಯೆಯ ಬಸ್ನಲ್ಲಿ ಚಾಲಕರಾಗಿ ನಿಜಲಿಂಗಪ್ಪ ಛಲವಾದಿ ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಕಾಸರಗೋಡಿನಿಂದ ನಿರ್ಗಮಿಸಿ ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ...
ಲ೦ಚ: ಪುತ್ತೂರು ತಹಶೀಲ್ದಾರ್ ಕಛೇರಿ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ
ಮ೦ಗಳೂರು: ಜಮೀನನ್ನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲ೦ಚಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಪ್ರಕರಣ ಪುತ್ತೂರು ತಹಶೀಲ್ದಾರ್ ಕಛೇರಿಯಲ್ಲಿ ನಡೆದಿದೆ. ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನೀಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಆರೋಪಿ.
ಪಿರ್ಯಾದಿದಾರರ ಚಿಕ್ಕಪ್ಪ ನವರಿಗೆ ಪುತ್ತೂರು ತಾಲೂಕು ನೆಟ್ಟಣಿಗೆ...
ತಲಪಾಡಿ : ಆಟೋ ರಿಕ್ಷಾಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಹಾಗೂ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಒ೦ದೆ ಕುಟು೦ಬದ 5 ಮ೦ದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ.. ಆಟೋರಿಕ್ಷಾ ಚಾಲಕ ಹೈದರ್ ಅಲಿ (47), ಅಜ್ಜಿನಡ್ಕದ ಖತೀಜಾ (60),ಅವರ ತ೦ಗಿ ನಫೀಸಾ (52),...



