ಪ್ರಯೋಗಾಲಯಗಳಿಗೆ ಆರೋಗ್ಯ ಇಲಾಖೆ ಭೇಟಿ – ಪರಿಶೀಲನೆ
ನಗರದ ವಿವಿದೆಡೆ ಕಾರ್ಯಾಚರಿಸುತ್ತಿದ್ದ ವ್ಯದ್ಯಕೀಯ ಪ್ರಯೋಗಾಲಯಗಳಿಗೆ ಅರೋಗ್ಯ ಇಲಾಖೆ ತಂಡ ಶನಿವಾರ ಭೇಟಿ ನೀಡಿ ಪರಿಶೀಲಿಸಿತು.ನಗರದ ಹಂಪನಕಟ್ಟೆ ಪರಿಸರದ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಲೈಸನ್ಸ್ ಅವಧಿ ಮುಕ್ತಾಯವಾಗಿ ಮತ್ತು ನಿಯಮಾನುಸಾರ ಕಾರ್ಯನಿರ್ವಾಹಿಸದಿರುವು ದು, ಬಯೋಮೆಡಿಕಲ್ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವ ಪ್ರಕರಣಗಳು ಕಂಡುಬಂದಿದ್ದು, ಇವುಗಳಿಗೆ ನೋಟೀಸ್ ನೀಡಲಾಗಿದೆ.ದೇರಳಕಟ್ಟೆಯ ಪ್ರಯೋಗಾಲಯವೊಂದು ಯಾವುದೇ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿದ್ದು,...
ಮಳೆ ಹಾನಿ: ಶಾಸಕ ಕಾಮತ್ ಪರಿಶೀಲನೆ
ಮ೦ಗಳೂರು: ನಗರದಲ್ಲಿ ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಪಾಂಡೇಶ್ವರದ ಪೋರ್ಟ್ ವಾರ್ಡ್ ಸಂಖ್ಯೆ 45 ರಲ್ಲಿ ಮನೆಯೊಂದಕ್ಕೆ ತೀವ್ರ ಹಾನಿಯಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಮಳೆಯಿಂದಾಗಿ ಸೇಸಪ್ಪ ಎಂಬುವವರ ಮನೆಗೆ ತೀವ್ರ ಹಾನಿಯುಂಟಾಗಿದೆ....
ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳಬೇಕು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ,ಉತ್ತಮ ನಡೆ ನುಡಿ ಹೊಂದಿ ಇತರರಿಗೆ...
ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ
ಮಂಗಳೂರು : ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಶನಿವಾರ ಬಿಡುಗಡೆ ಮಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ , ಖಾಸಗಿ, ಕನ್ನಡ...
ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ-ಮಹಾನಗರಪಾಲಿಕೆ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆ.ಎಂ.ಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕಾಗಿರುತ್ತದೆ. ಕಟ್ಟಡ ಪರವಾನಿಗೆಯನ್ನು ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ ಕಟ್ಟಡ ಪ್ರವೇಶ ಪತ್ರ ಪಡೆದ ನಂತರ ಕಟ್ಟಡವನ್ನು ಉಪಯೋಗಿಸಬೇಕಾಗಿರುತ್ತದೆ.ಸುಪ್ರೀಂ ಕೋರ್ಟ್ ಆದೇಶದಂತೆ ಕಟ್ಟಡ ಪ್ರವೇಶ ಪತ್ರ ಪಡೆಯದ...
ತೆರಿಗೆ ಪಾವತಿಯಲ್ಲಿ ಜಿಲ್ಲೆಯ ಜನರ ಬದ್ಧತೆ ಶ್ಲಾಘನೀಯ: ಡಾ ಆನಂದ್
ಮ೦ಗಳೂರು: ಮನೆ ತೆರಿಗೆ ಸೇರಿದಂತೆ ಯಾವುದೇ ಸರಕಾರಿ ಪಾವತಿಗಳನ್ನು ಬಹಳ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಪಾವತಿಸುವ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮನೋಭಾವನೆ ಶ್ಲಾಘನೀಯ ಎಂದು ಜಿಲ್ಲಾ ಪಂಚಾಯತ್ ನಿಕಟಪೂರ್ವ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಮತ್ತು ವಿಜಾಪುರ ಜಿಲ್ಲಾಧಿಕಾರಿ ಡಾ ಕೆ ಆನಂದ್ ಹೇಳಿದ್ದಾರೆ.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತನಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ...
ಭಾರಿ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು: ಶಾಸಕ ಕಾಮತ್ ಭೇಟಿ
ಮ೦ಗಳೂರು: ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ...
ಸಾಲ ಕೊಡಿಸುವುದಾಗಿ ನಂಬಿಸಿ 3 ತಿಂಗಳಲ್ಲಿ 32 ಕೋಟಿ ರೂ. ಪಡೆದಿದ್ದ ಬಹುಕೋಟಿ ವ೦ಚಕ ರೋಶನ್ ಸಲ್ಡಾನ
ಮ೦ಗಳೂರು: ಬಹುಕೋಟಿ ವ೦ಚಕ ರೋಶನ್ ಸಲ್ಡಾನ (43 ) ಇತರರ ಜತೆ ಸೇರಿ ಕಳೆದ 3 ತಿಂಗಳಲ್ಲಿ 32 ಕೋಟಿ ರೂ.ಗಳನ್ನು ಪಡೆದುಕೊಂಡಿರುವುದು ಪೊಲೀಸ್ ಪರಿಶೀಲನೆ ವೇಳೆ ಕ೦ಡುಬ೦ದಿದೆ.
ಮಂಗಳೂರು ಬಜಾಲ್ ಬೊಲ್ಲಗುಡ್ಡದಲ್ಲಿ ಭವ್ಯ ಬ೦ಗಲೆ ನಿಮಿ೯ಸಿಕೊ೦ಡು ವಾಸಿಸುತ್ತಿದ್ದ ರೋಶನ್ ಸಲ್ಡಾನ(43 ) ಮೇಲೆ ಮಂಗಳೂರು ಸೆನ್...
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ
ಮಂಗಳೂರು: ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ನೋಂದಾಯಿತರಾದ ಕಾನೂನು...
ಸಿಎಎಸ್’ಕೆ ಸೆಂಟಿನರಿ ಟ್ರಸ್ಟ್ : ವಿದ್ಯಾ ಸಹಾಯಧನ ವಿತರಣಾ ಸಮಾರಂಭ
ಮ೦ಗಳೂರು: ಸಿಎಎಸ್’ಕೆ ಸೆಂಟಿನರಿ ಟ್ರಸ್ಟ್ ವತಿಯಿಂದ ರೂ. 30 ಲಕ್ಷಕ್ಕೂ ಮಿಕ್ಕ ಮೌಲ್ಯದ ವಿದ್ಯಾರ್ಥಿವೇತನವನ್ನು 307 ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಸಮಾರಂಭ ಜು.19 ಶನಿವಾರ ದಂದು ಸೆಂಟ್ ಆಗ್ನೆಸ್ಕಾಲೇಜಿನ ಸೆಂಟಿನರಿ ಕಟ್ಟಡದಲ್ಲಿ ನಡೆಯಲಿದೆ.ಈ ವಿದ್ಯಾರ್ಥಿವೇತನಗಳನ್ನು ಟ್ರಸ್ಟ್ 2014 ರಿಂದ ನಿರಂತರವಾಗಿ ನೀಡುತ್ತಿದ್ದು, ಧರ್ಮ, ಭಾಷೆ, ಅಂಕಗಳುಅಥವಾ ಪ್ರತಿಭೆಗೆ ಯಾವುದೇ ಮಹತ್ವ ನೀಡದೆ, ಕೇವಲ ವಿದ್ಯಾರ್ಥಿಯ...






