ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ : ಸುಭಾಷ್ಚಂದ್ರ ಶೆಟ್ಟಿ
ಮ೦ಗಳೂರು: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ, ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ " ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ " ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು...
ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ
ಮಂಗಳೂರು:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಯೋಜನೆಯಡಿ...
“ಶ್ರೀ ಕೃಷ್ಣನ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು”
ಮಂಗಳೂರು: ಶ್ರೀ ಕೃಷ್ಣ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಭಗವಾನ್ ಶ್ರೀ ಕೃಷ್ಣನ ಜೀವನ ಚರಿತ್ರೆಯ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘ,...
ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ : ಒಡ೦ಬಡಿಕೆ
ಮಂಗಳೂರು: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ.ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್...
ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ :- ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್
ಮ೦ಗಳೂರು: ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು.
ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ...
ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ-ಮಟ್ಟಾರು ವಿಠಲ ಕಿಣಿ
ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು.ಅವರು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ ,ಉಡುಗೊರೆ ನೀಡಿ...
ರೆಡ್ ಕ್ರಾಸ್ನಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಮಂಗಳೂರು ವಿ.ವಿ. ಯೂತ್ ರೆಡ್ಕ್ರಾಸ್ ಘಟಕದ ವತಿಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಬುಧವಾರ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿದ್ದ ಯುನಿಟಿ ಕೇರ್ ಅಂಡ್ ಹೆಲ್ತ್ ಸರ್ವಿಸಸ್ನ ಚೇರ್ಮನ್ ಡಾ.ಸಿ.ಪಿ.ಹಬೀಬ್ ರಹಿಮಾನ್ ಮಾತನಾಡಿ ‘ ಸಾವಿನ ನಂತರವೂ ಬದುಕು ನೀಡುವ...
“ಹರ್ ಘರ್ ತಿರಂಗಾ ಉತ್ಸವ” ಅಭಿಯಾನಕ್ಕೆ ಚಾಲನೆ
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ಯ್ರದ ಉತ್ಸವ” ಹಾಗೂ ಒಂದು ವಾರದ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಪ್ರತಿಜ್ಞಾ ವಿಧಿ ಬೋಧಿಸಿದರು.ಅವರು ಮಾತನಾಡಿ, ದೇಶಾದ್ಯಂತ...
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ :ಜಿ. ಪಂ ಸಿಇಒ ಸೂಚನೆ
ಮಂಗಳೂರು: ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ...
ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸರು
ಮ೦ಗಳೂರು: ಆ.8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯ ರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ...








