ಲೋಕಸಭಾ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ವಿಧಾನ ಸಭಾಕ್ಷೇತ್ರ: ಬೆಳ್ತಂಗಡಿ ಕ್ಷೇತ್ರ-ಎಂ.ಎಸ್.ಮಹಮ್ಮದ್, ಮೂಡಬಿದ್ರೆ ಕ್ಷೇತ್ರ - ಮಹಾಬಲ ಮಾರ್ಲ, ಮಂಗಳೂರು ನಗರ ಉತ್ತರ ಕ್ಷೇತ್ರ - ಕೆ.ಶುಭೋದಯ ಆಳ್ವ, ಮಂಗಳೂರು ನಗರದಕ್ಷಿಣ ಕ್ಷೇತ್ರ - ಪ್ರತಿಭಾ ಕುಳಾಯಿ, ಮಂಗಳೂರು ಕ್ಷೇತ್ರ...

ಮಂಗಳೂರು:  ವಿಕಸಿತ ಭಾರತಸಂಕಲ್ಪ ಯಾತ್ರೆಗೆ ಚಾಲನೆ

0
ಮಂಗಳೂರು:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆಶುಕ್ರವಾರ ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿ ನಲ್ಲಿ  ಚಾಲನೆ‌ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು  ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ ,ಯುನಿಯನ್ ಬ್ಯಾಂಕ್ ಡಿಜಿಎಂ...

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 22ರ ವರೆಗೆ...

ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮಗಳನ್ನು ನೀಡಿದೆ:. ಬೈರತಿ ಸುರೇಶ್

0
ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಮಗೆಲ್ಲರಿಗೂ ತಾಯಿ ಇದ್ದಂತೆ. ಕಾಂಗ್ರೆಸ್ ಇಲ್ಲದೆ ನಮ್ಮ ಅಸ್ಥಿತ್ವ ಇರುವುದಿಲ್ಲ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಸರಕಾರ ನೀಡಿದ್ದು, ಜನಪರವಾದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪಕ್ಷವನ್ನು ಕರಾವಳಿ...

ಮರಣದ ದೃಢೀಕರಣ ಪತ್ರ ನೀಡಲು ಲಂಚ : ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಬಂಧನ

0
ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ.ಇಲ್ಲಿನ ನಿವಾಸಿಯೊಬ್ಬರು, ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಚೇಳ್ಯಾರು ಎಂಬಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಸದ್ರಿ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ...

ಸುರತ್ಕಲ್ ಮಾರುಕಟ್ಟೆ ಕಾಮಗಾರಿ‌ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ

0
ಮ೦ಗಳೂರು: ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು. ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ...

ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗಲಿ: ಪ್ರೊ. ಪಿ. ನಾಗಭೂಷಣ್

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) – ಎ.ಐ.ಸಿ.ಟಿ.ಇ ತರಬೇತಿ ಮತ್ತು ಕಲಿಕಾ ಅಕಾಡೆಮಿ (ATAL) ಗಳ ಸಹಯೋಗದೊಂದಿಗೆ, "ಡೀಪ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಅಡ್ವಾನ್ಸಿಂಗ್‌ ಮೆಡಿಕಲ್‌ ಇಮೇಜ್ ಪ್ರೊಸೆಸಿಂಗ್" ಎಂಬ ಒಂದು ವಾರದ ಬೋಧನಾ ವಿಭಾಗದ ಅಭಿವೃದ್ಧಿ ಕಾರ್ಯಕ್ರಮ (FDP) ವನ್ನು ಮಂಗಳಗಂಗೋತ್ರಿಯಲ್ಲಿ...

ಗಬ್ಬರ್ ಸಿಂಗ್ ತುಳು ಸಿನಿಮಾ ಮಾಚ್೯ 22 ರಂದು ತೆರೆಗೆ

ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರ ಮಾಚ್೯ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು ತಿಳಿಸಿದ್ದಾರೆ.ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು...

ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...

ನ.26ರಂದು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ವಿಶುಕುಮಾರ್ ದತ್ತಿನಿಧಿ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ನ.26ರ ಆದಿತ್ಯವಾರ ಮಂಗಳೂರು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾರ್ಯಕ್ರಮ ಜರಗಲಿದೆ ಎ೦ದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.ಪ್ರಶಸ್ತಿ ಪ್ರದಾನ ಸಮಾರಂಭ ಮಾತ್ರವಲ್ಲದೆ, ಕನ್ನಡ ರಾಜ್ಯೋತ್ಸವ ವಿಶುಕುಮಾರ್ ಸಾಹಿತ್ಯೋತ್ಸವ ಎನ್ನುವ ಒಂದು ದಿನ ಪೂರ್ತಿ...