ಮಂಗಳೂರು ತಾ. ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ

0
ಮಂಗಳೂರು: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನ ಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ಬುಧವಾರ ನಾಗೂರಿ, ಅಡ್ಯಾರ್, ಮಲ್ಲೂರು , ಬೊಂಡಂತಿಲ , ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ...

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: 2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ...

ರೆಡ್‌ಕ್ರಾಸ್‌ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0
ಮಂಗಳೂರು : ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆಬಲಿಯಾಗುತ್ತಿದ್ದಾರೆ. ಇದು ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ ಎಂದು ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನ.ಪಿ.ಕುಮಾರ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ...

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು : ಮಂಗಳೂರು ನಗರ ಪೊಲೀಸ್ ಪ್ರಕಟನೆ

0
ಮ೦ಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಪ್ರಕರಣಗಳ ಕುರಿತ೦ತೆ ನೋಟಿಸ್ ಸ್ವೀಕೃತಿಯಾಗಿರುವ ವಾಹನದ ನೋಂದಣಿ ಮಾಲಕರು ದಂಡವನ್ನು ಪಾವತಿ ಮಾಡಿ, ಮುಂದೆ ಆಗುವ ಪರಿಣಾಮಗಳಿಗೆ ಅವಕಾಶವನ್ನು ನೀಡದಂತೆ ಮಂಗಳೂರು ನಗರ ಪೊಲೀಸ್ ಪ್ರಕಟನೆಯಲ್ಲಿ ಕೋರಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ...

ಎಂ.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆಮತ್ತು ಸ್ಕೂಲ್ ಬ್ಯಾಗ್ ವಿತರಣೆ

0
ಮ೦ಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು,ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ...

ವರದಿ ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ : ಸುಧೀರ್ ಕುಮಾರ್ ರೆಡ್ಡಿ

0
ಮಂಗಳೂರು : ವರದಿಯನ್ನು ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ.ಯಾವುದೇ ಸಮಸ್ಯೆಗಳ ಸಂದರ್ಭ ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವುದಕ್ಕಿಂತಲೂ ಸತ್ಯವನ್ನು ಎತ್ತಿ ತೋರಿಸುವುದು ಪ್ರಮುಖವಾಗಬೇಕು. ಸುದ್ದಿಯಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಆರೋಪಿ ಮತ್ತು ಸಂತ್ರಸ್ತರನ್ನು ಒಂದೇ ಆಗಿ ಪರಿಗಣಿಸಬಾರದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ...

ತುಳು ನಾಟಕ ಕಾರ್ಯಗಾರ ಉದ್ಘಾಟನೆ

0
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ...

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ:ರಾಜೇಶ್ ಬಿ

0
ಮಂಗಳೂರು: ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ...

ಜೂ.26ರಂದು ರೆಡ್‌ಕ್ರಾಸ್‌ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...

ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ

0
ಮಂಗಳೂರು: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದ್ದು ಅದನ್ನು ಸಾಕಾರಗೊಳಿಸಲಿದೆ" ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಆದಿತ್ಯವಾರದಂದು...