ಲಾರಿಗೆ ಬಸ್ ಡಿಕ್ಕಿ: ಪ್ರಯಾಣಿಕ ಸಾವು
ಮ೦ಗಳೂರು:ಲಾರಿಗೆ ಬಸ್ ಡಿಕ್ಕಿಯಾಗಿ ಪ್ರಯಾಣಿಕ ಮೃತಪಟ್ಟ ಘಟನೆ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ರವಿವಾರ ರಾತ್ರಿ ಸ೦ಭವಿಸಿದೆ.ಕಾರ್ಕಳ ನಿವಾಸಿ ಶಂಕರ ನಾರಾಯಣ ಮೃತಪಟ್ಟವರು.ರವಿವಾರ ರಾತ್ರಿ ಸುಮಾರು 11.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರ್ಕಳ ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಹೆಸರಿನ ಬಸ್ ಇಟಾಚಿಯನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂದಿನಿಂದ...
ಡಿಪ್ಲೋಮಾ ಕೋರ್ಸ್ಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ...
ಇರಾನ್ನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯ ಸುರಕ್ಷತೆಗೆ ಕ್ರಮ
ಮಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜಧಾನಿಯಾದ ಟೆಹರಾನ್ನಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಈ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಆತಂಕಗೊಂಡಿರುತ್ತಾರೆ.ಈ ವಿದ್ಯಾರ್ಥಿಗಳ ಪೈಕಿ ಒರ್ವ ವಿದ್ಯಾರ್ಥಿಯಾದ ನದೀಮ್ ಹುಸೇನ್ ಹಾಗೂ ಬೆಂಗಳೂರಿನಲ್ಲಿರುವ ಅವರ...
ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು: ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧೆÉಡೆಗಳಲ್ಲಿ ಯೋಗ ಸಂಘಟನೆಗಳು/ ಆಯುಷ್ ಕಾಲೇಜುಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳು ಸೇರಿ ಸಾರ್ವಜನಿಕರಿಗೆ ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.• ಯೋಗ ಹರಿತ್: ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡಗಳನ್ನು...
ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್
ಮ೦ಗಳೂರು: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ...
ಓಝಾಸ್ ಸಂಸ್ಥೆ:ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಮ೦ಗಳೂರು: ಓಝಾಸ್ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ರಾಮಾನಂದಶ್ರಮ ಶಾಲೆಯ ಒಂದನೇ ತರಗತಿಯಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ನೋಟ್ ಬುಕ್ಗಳನ್ನು ವಿತರಿಸಲಾಯಿತು.ಓಝಾಸ್ ಸಂಸ್ಥೆಯ ಸ್ಥಾಪಕಿ ಮತ್ತು ಅಧ್ಯಕ್ಷೆ ಮಂಗಳಾ ನಂದಕುಮಾರ್ ಅವರು ಮಾತನಾಡಿ ‘ಮಕ್ಕಳು ಎಳೆ ವಯಸ್ಸಿನಲ್ಲಿಯೇ ಶಿಸ್ತುಬದ್ಧ ಮತ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾಧನೆಯ ಶಿಖರವನ್ನೆರಬಹುದು. ಇದಕ್ಕೆ...
ಕೆನರಾ ಬ್ಯಾಂಕ್ ವತಿಯಿಂದ ಪತ್ರಿಕಾ ವಿತರಕರಿಗೆ ರೈನ್ ಕೋಟ್ ವಿತರಣೆ
ಮಂಗಳೂರು,ಕೆನರಾ ಬ್ಯಾಂಕ್ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿಯಲ್ಲಿ ನಗರದ ಪತ್ರಿಕಾ ವಿತರಕರಿಗೆ ರೈನ್ ಕೋಟ್ ನೀಡುವ ವಿಶೇಷ ಕಾರ್ಯಕ್ರಮ ಕೆನರಾ ಬ್ಯಾಂಕ್ನ ವೃತ್ತ ಕಚೇರಿಯಲ್ಲಿ ನಡೆಯಿತು.
ಕೆನರಾ ಬ್ಯಾಂಕ್ನ ಡಿಜಿಎಂ ಶೈಲೇಂದ್ರನಾಥ್ ಶೀತ್ ಮಾತನಾಡಿ,ಬ್ಯಾಂಕ್ ನ ಮಹಾಪ್ರಭಂದಕ ಮಂಜುನಾಥ್ ಸಿಂಘಯ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಪತ್ರಿಕಾ ವಿತರಕರು ಮಳೆ, ಚಳಿ ಬಿಸಿಲು ಲೆಕ್ಕಿಸದೆ...
ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ’ಯುವ್ವಿಕಾಸ ’ ಕಾರ್ಯಕ್ರಮ
ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಯುವಜನರಿಗೆ ಉದ್ಯೋಗ- ಉದ್ದಿಮೆಯ ಅವಕಾಶ-ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡುವ "ಯುವ್ವಿಕಾಸ " ಎಂಬ ಯುವ ಸಬಲೀಕರಣ ಕಾರ್ಯಕ್ರಮ ಜೂ. 16 ರಂದು ಸುಳ್ಯದ ತಾಲೂಕು ಪಂಚಾಯತ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಯುವಜನರಿಗೆ, ವಿದ್ಯಾರ್ಥಿಗಳಿಗೆ ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ...
ಎ೦ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ
ಮ೦ಗಳೂರು: ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. 14.ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ...
ಜೂ.14ರಂದು ರೆಡ್ಕ್ರಾಸ್ನಿಂದ ವಿಶ್ವ ರಕ್ತದಾನಿಗಳ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಜೂ.14ರಂದು ಬೆಳಗ್ಗೆ 11.15ಕ್ಕೆ ನಗರದ ಕೊಡಿಯಾಲ್ಬೈಲ್ನ ಎಸ್ಡಿಎಂ ಕಾನ್ಫರೆನ್ಸ್ ಹಾಲ್ನಲ್ಲಿ ನಡೆಯಲಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...




