ಮೇ 16 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಮೇ 16 ರಂದು ಮಧ್ಯಾಹ್ನ 3:15 - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ್ಷಣೆ, ಸಂಜೆ 4:15- ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ''ಪ್ರಜಾ...
ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ
ಮ೦ಗಳೂರು: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು,...
ಲ೦ಚ ಪ್ರಕರಣ: ಬಂಟ್ವಾಳ ತಾಲೂಕು ಖಜಾನೆಯ ಅಧಿಕಾರಿ, ಸಿಬ್ಬ೦ದಿ ಬ೦ಧನ
ಮ೦ಗಳೂರು: ಲ೦ಚ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಅಧಿಕಾರಿ ಹಾಗೂ ಸಿಬ್ಬ೦ದಿ.
ಭಾಸ್ಕರ್
ಪಿರ್ಯಾದಿದಾರರ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊ೦ದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್...
ರವೀಂದ್ರನಾಥ ಠಾಗೋರ್ ಜನ್ಮ ದಿನಾಚರಣೆ
ಮಂಗಳೂರು: ಓದುವುದು ದಿನದಿಂದ ದಿನಕ್ಕೆ ಹೆಚ್ಚಾದರೆ ಲೋಕ ಜ್ಞಾನ ತಿಳಿಯಲು ಸಾಧ್ಯ. ಠಾಗೋರ್ವಲ ಬರಹಗಾರ ಮಾತ್ರವಲ್ಲ, ಸ್ವಾತಂತ್ರ್ಯ ಹೋರಾಟಗಾರ, ಚಿಂತಕ ಕೂಡ ಹೌದು. ಅವರ ವಿಚಾರಧಾರೆಗಳನ್ನುಅವರ ಬರಹಗಳಲ್ಲಿ ಕಾಣಬಹುದು ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ ಆಂತರಿಕ ಗುಣಮಟ್ಟ ಖಾತರಿಕೋಶ ಮತ್ತು ಇಂಗ್ಲಿಷ್ಸಂಘದ ವತಿಯಿಂದ ರವೀಂದ್ರನಾಥ...
ಡಾ. ಕನ್ಯಾನ ಸದಾಶಿವ ಶೆಟ್ಟಿಯವರಿಂದ “ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ 3 ಕೋಟಿ ರೂಪಾಯಿ ದೇಣಿಗೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಭೂತಪೂರ್ವ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್ ನ ಗೌರವಾಧ್ಯಕ್ಷರಾದ ಮಹಾದಾನಿ, ಗೌರವಾನ್ವಿತ ಡಾ ಕೆ ಸದಾಶಿವ ಶೆಟ್ಟಿ ಯವರು ಫೌಂಡೇಶನ್ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆಯನ್ನು ಘೋಷಿಸಿದ್ದಾರೆ. ಕನ್ಯಾನ ಸದಾಶಿವ ಶೆಟ್ಟಿಯವರು ಪಟ್ಲ ಫೌಂಡೇಶನ್ನಿನ ಗೌರವಾಧ್ಯಕ್ಷರಾದ ನಂತರ ಟ್ರಸ್ಟಿನ ಕಾರ್ಯ ಯೋಜನೆಗಳು ನಾಗಾಲೋಟದಲ್ಲಿ...
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ
ಮಂಗಳೂರು: ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ ಸೂಚಿಸಿದರು.ಅವರು ದ.ಕ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ...
ಯುವ ರೆಡ್ಕ್ರಾಸ್ ಪ್ರೇರಣಾ ಶಿಬಿರ ಸಮಾರೋಪ
ಮಂಗಳೂರು : ಯುವ ರೆಡ್ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್ಕ್ರಾಸ್ ಸದಸ್ಯರಿಗೆ ಆಯೋಜಿಸಿದ ಮೂರು ದಿನಗಳ ಪ್ರೇರಣಾ ಶಿಬಿರದ ಸಮಾರೋಪ ಸಮಾರಂಭ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ನಡೆಯಿತು.ಮುಖ್ಯ ಅತಿಥಿಯಾಗಿದ್ದ ಬ್ಯಾಂಕ್ ಆಫ್...
ಎಂ.ಸಿ. ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ
ಮ೦ಗಳೂರು: ಎಂಸಿ.ಸಿ.ಬ್ಯಾ೦ಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಮೇ10ರ೦ದು ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯು ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಿ ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಗುರುತಿಸಿತು. ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತಾದ ಸಾಕ್ಷಚಿತ್ರವನ್ನು ಈ...
ವಿಶ್ವ ರೆಡ್ಕ್ರಾಸ್ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ರೆಡ್ಕ್ರಾಸ್ ದಿನಾಚರಣೆ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಅವರು ಮಾತನಾಡಿ ‘ ಜನತೆಯ ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್ಕ್ರಾಸ್ ಸಂಸ್ಥೆಯ ಧ್ಯೇಯವಾಗಿದೆ. ಸಣ್ಣಪುಟ್ಟ ನೆರವು ನೀಡುವ ಮೂಲಕ ಕೂಡಾ ಇನ್ನೊಬ್ಬರ...
‘ಇಗ್ನೈಟಿಂಗ್ ಇನೋವೇಷನ್: ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ ’
ಮ೦ಗಳೂರು: ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ 2025 ಸೈ೦ಟ್ ಅಲೋಶಿಯಸ್ ವಿವಿಯ ಎಐಎ೦ಐಟಿ ನ ಶೆಣೈ ಸಭಾಂಗಣದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಎಂ.ಬಿ.ಎ) ವಿಭಾಗದ ವತಿಯಿಂದ ಆಯೋಜಿಸಲಾಯಿತು.
.ಮುಖ್ಯ ಅತಿಥಿಯಾಗಿ ಪ್ರಖ್ಯಾತ ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಉಲ್ಲಾಸ್ ಕಾಮತ್ ಅವರು ಪಾಲ್ಗೊಂಡರು. ರೆ। ಫಾ| ಕಿರಣ್ ಕೊತ್ ಎಸ್ಜೆ (ಎಐಎ೦ಐಟಿ ನಿರ್ದೇಶಕ), ಡಾ....





