32.1 C
Karnataka
Tuesday, April 22, 2025

ಸೈಬರ್ ಅಪರಾಧಗಳ ತಡೆಗೆ ಪೋಲಿಸ್ ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ

ಮಂಗಳೂರು: ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್‌ ನಿದೇ೯ಶನಕರು ಮತ್ತು ಪೊಲೀಸ್ ಮಹಾ ನೀರಿಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು.
ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು ಮ೦ಗಳವಾರ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ 1930 ಸಹಾಯವಾಣಿಯಲ್ಲಿ ಸ್ವೀಕರಿಸಿದ ಕರೆಗಳ ಸಂಖ್ಯೆ 2022 ರಲ್ಲಿ 1.30 ಲಕ್ಷ ಇದ್ದು, ನಂತರ 2024 ರಲ್ಲಿ 8.26 ಲಕ್ಷಕ್ಕೆ ಮತ್ತು 2025 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 4.34 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಆನ್‍ಲೈನ್ ಹಣಕಾಸು ವಂಚನೆಗಳಿಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಸಾರ್ವಜನಿಕರು ದೂರು ದಾಖಲಿಸಲು ಅನುವಾಗುವಂತೆ ಸೈಬರ್ ಅಪರಾಧ ಸಹಾಯವಾಣಿ-1930 ಹಾಗೂ ವೆಬ್ ಬಾಟ್ ಉನ್ನತೀಕರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ (Emergency Response Support
System)ಸಾರ್ವಜನಿಕ ಸುರಕ್ಷತಾ ಪ್ರತ್ಯುತ್ತರ ಕೇಂದ್ರವನ್ನು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಪರ್ಕ, ಸಾರಿಗೆ ಮತ್ತು ಆಧುನೀಕರಣರವರ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ಸದರಿ 1930 ಸಹಾಯವಾಣಿ ಕೇಂದ್ರದಲ್ಲಿ ಆನ್‍ಲೈನ್ ಹಣಕಾಸು ವಂಚನೆ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು National Cyber crime Reporting Portal(NCRP)ಮೂಲಕ ದಾಖಲಿಸಲಾಗುತ್ತಿದೆ.
ಈ ರೀತಿಯಲ್ಲಿ ದೂರುದಾರರ ಕರೆಗಳ ಸಂಖ್ಯೆಯು ಏರಿಕೆಯಾಗುತ್ತಿರುವುದರಿಂದ, ಹೆಚ್ಚು ಸಂಖ್ಯೆಯ ಕರೆಗಳು ಕಡಿತಗೊಂಡಿರುವುದು (Call Drops) ಕಂಡುಬಂದಿರುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಕರೆಗಳು ತಮ್ಮ ದೂರಿನ ಸ್ಥಿತಿ ವಿಚಾರಣೆ ಮತ್ತು ಸೈಬರ್ ಅಪರಾಧದ ಕುಂದುಕೊರತೆಗಳಿಗೆ ಸಂಬಂಧಿಸಿದ ಕರೆಗಳಾಗಿದ್ದು, ಎಲ್ಲಾ ಕರೆ ಸ್ವೀಕರಿಸುವ ಸಿಬ್ಬಂದಿಗಳು ಕಾರ್ಯನಿರತರಾಗಿರುತ್ತಿದ್ದ ಕಾರಣ 1930-ಸಹಾಯವಾಣಿಗೆ ಹೊಸ ದೂರುಗಳನ್ನು ದಾಖಲಿಸುವವರು ಶೀಘ್ರವಾಗಿ ಸಂಪರ್ಕಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ದೂರುದಾರರಿಗೆ 1930-ಸಹಾಯವಾಣಿಯ ಸಂಪರ್ಕ ಸಿಗದೆ ಗೋಲ್ಡನ್ ಅವರ್‍ನಲ್ಲಿ ದೂರು ದಾಖಲಿಸಲು ಕಷ್ಟಕರವಾಗುತ್ತಿತ್ತು. ಈ ದೂರುದಾರರಲ್ಲಿ ಹಿರಿಯ ನಾಗರೀಕರು ಸಹ ಕರೆ ಮಾಡುತ್ತಿದ್ದು 1930 ಸಹಾಯವಾಣಿಗೆ ಕರೆ ಮಾಡಿದ ಸಮಯದಲ್ಲಿ ಸಂಪರ್ಕ ಸಿಗದೇ ಆಸಹಾಯಕರಾಗಿದ್ದರು.
ಈ ಸಮಸ್ಯೆಯಿಂದ ಹಣಕಾಸು ವಂಚನೆಗೊಳಗಾದ ದೂರುದಾರರ ಹಣವನ್ನು ಗೋಲ್ಡನ್ ಅವರ್‍ನಲ್ಲಿ ಸಂಬಂಧಿಸಿದ ಬ್ಯಾಂಕ್‍ಗಳಲ್ಲಿ ತಡೆಹಿಡಿಯುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು. ಇದರಿಂದಾಗಿ ಸದರಿ ಹಣ ವಂಚಕರ ಖಾತೆಗೆ ವರ್ಗಾವಣೆಯಾಗಲು ಸುಲಭವಾಗುತ್ತಿತ್ತು.
ಈ ಎಲ್ಲಾ ಸಮಸ್ಯೆಗಳನ್ನು ಮನಗಂಡ ಇಲಾಖೆಯು, ಸಮಸ್ಯೆಯನ್ನು ಪರಿಹರಿಸಲು ದೂರುದಾರರ ಕರೆಗಳನ್ನು ಹಣಕಾಸು ಸಂಬಂಧಿತ ದೂರುಗಳು, ಹಣಕಾಸೇತರ ಸಂಬಂಧಿತ ದೂರುಗಳು (WhatsApp/Facebook
ಖಾತೆಯ ಹ್ಯಾಕ್‌ ಗಳು Impersonation), ದೂರಿನ ಸ್ಥಿತಿ ವಿಚಾರಣೆಗಳು ಮತ್ತು ಸೈಬರ್ ಅಪರಾಧ ಸಂಬಂಧಿತ ಕುಂದುಕೊರತೆ ಕರೆಗಳಾಗಿ ಐವಿಆರ್ ವ್ಯವಸ್ಥೆಯ ಮೂಲಕ ವರ್ಗೀಕರಿಸಲಾಗಿದೆ.
ಇದರಿಂದಾಗಿ ಹೊಸ ದೂರನ್ನು ಸಕಾಲದಲ್ಲಿ ದಾಖಲಿಸುವವರಿಗೆ ಆದ್ಯತೆ ನೀಡಲಾಗಿದೆ ಮತ್ತು Voice Guided WebBOT ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ದೂರುದಾರರು ವೆಬ್ ಬಾಟ್ ಮೂಲಕ ಮಾಹಿತಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಎಸ್‍ಎಂಎಸ್ ಮೂಲಕ ವೆಬ್ ಬಾಟ್ ಲಿಂಕ್ ಅನ್ನು ಕಳುಹಿಸಲಾಗುತ್ತದೆ.
ನಂತರ ಈ ಸಹಾಯವಾಣಿಯ ಸಿಬ್ಬಂದಿಯ ಮೂಲಕ ಸದರಿ ಮಾಹಿತಿಯನ್ನು ಎನ್.ಸಿ.ಆರ್.ಪಿ ಯಲ್ಲಿ ದಾಖಲಿಸಲಾಗುತ್ತದೆ. ಇದು ಸಾರ್ವಜನಿಕರಿಗೆ 1930 ಸಹಾಯವಾಣಿಯಲ್ಲಿ ದೂರು ಸಲ್ಲಿಸಲು ಹಾಗೂ ಕಾಲ್ ಡ್ರಾಪ್‍ಗಳನ್ನು ಸಹ ತಡೆಯಲು ಸಹಾಯವಾಗುತ್ತದೆ.

1930 ಸಹಾಯವಾಣಿಯ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತವಾಗಿದ್ದ ಸಮಯದಲ್ಲಿ ದೂರುದಾರರು ಸ್ವ-ಇಚ್ಛೆಯಿಂದ ಕರೆ ಕಡಿತಗೊಳಿಸಿದ ಸಮಯದಲ್ಲೂ ಸಹ ಎಸ್‍ಎಂಎಸ್ ಮುಖಾಂತರ ಈ ವೆಬ್ ಬಾಟ್ ಲಿಂಕ್ ಅನ್ನು ದೂರುದಾರರಿಗೆ ಕಳುಹಿಸಲಾಗುತ್ತದೆ.
2022 ರಲ್ಲಿ 20,894 ದೂರುಗಳನ್ನು ಸೈಬರ್ ಕ್ರೈಂ ಸಹಾಯವಾಣಿ-1930 ಮೂಲಕ National Cyber crime ReportingPortal (NCRP)ನಲ್ಲಿ ದಾಖಲಿಸಲಾಗಿದ್ದು, 2024 ರಲ್ಲಿ 97,929 ದೂರುಗಳನ್ನು ದಾಖಲಿಸಲಾಗಿತ್ತು. 2022ನೇ ಇಸವಿಯಲ್ಲಿ ವರದಿಯಾದ ಒಟ್ಟು ವಂಚನೆಯ ಮೊತ್ತವು ರೂ.113 ಕೋಟಿ ರೂಪಾಯಿಗಳಾಗಿದ್ದು, ನಂತರ 2024 ರಲ್ಲಿ ರೂ.2,396 ಕೋಟಿಗಳಿಗೆ ಏರಿಕೆಯಾಗಿರುತ್ತದೆ. ಈ ಸಂಬಂಧ ಸೈಬರ್ ಕ್ರೈಂ ಸಹಾಯವಾಣಿ-1930 ರ ಮೂಲಕ ಬ್ಯಾಂಕ್‍ಗಳಲ್ಲಿ ತಡೆಹಿಡಿಯಲಾದ ಮೊತ್ತವು 2022 ರಲ್ಲಿ 8 ಕೋಟಿಗಳಾಗಿದ್ದು, ನಂತರ 2024 ರಲ್ಲಿ ರೂ.226 ಕೋಟಿ ವಂಚನೆಯ ಹಣವನ್ನು ತಡೆಹಿಡಿಯಲಾಗಿದೆ. ಸದರಿ ಮೊತ್ತವು ವಂಚನೆಯ ಮೊತ್ತದ ಶೇಕಡಾ 9 ರಷ್ಟು ಆಗಿರುತ್ತದೆ.
ಈ ಹೊಸ ವ್ಯವಸ್ಥೆಯ ಪರಿಣಾಮದಿಂದಾಗಿ 2025 ರ ಮೊದಲ ತ್ರೈಮಾಸಿಕದಲ್ಲಿ 38,000 ಪ್ರಕರಣಗಳನ್ನು ಸೈಬರ್ ಕ್ರೈಂ ಸಹಾಯವಾಣಿ-1930 ಮೂಲಕ ದಾಖಲಿಸಲಾಗಿರುತ್ತದೆ. ಪ್ರಸ್ತುತ ವರ್ಷದಲ್ಲಿ ಮಾರ್ಚ್ 2025ರ ಅಂತ್ಯಕ್ಕೆ ವಂಚನೆ ಹಣದ ಶೇಕಡಾ 16 ರಷ್ಟು ಮೊತ್ತವನ್ನು ಬ್ಯಾಂಕ್‍ಗಳಲ್ಲಿಯೇ ತಡೆಯುವಲ್ಲಿ ಶ್ರಮವಹಿಸಿರುತ್ತೇವೆ ಎಂದು ಹೇಳಿದರು.
ವೆಬ್ ಬಾಟ್ ವ್ಯವಸ್ಥೆ ಜೊತೆಗೆ ಹೊಸ ಸೌಲಭ್ಯಗಳ ವಿವರ:1930 ಸಹಾಯವಾಣಿಯಲ್ಲಿ ಈ ಹಿಂದಿನ ದೂರವಾಣಿ ಮೂಲಸೌಕರ್ಯವನ್ನು ಬದಲಾಯಿಸಿ SIP ಲೈನ್‍ಗಳಿಗೆ ಉನ್ನತೀಕರಿಸಲಾಗಿದೆ. ಇದು ಹೆಚ್ಚುತ್ತಿರುವ ದೂರು ಕರೆಗಳ ಪ್ರಮಾಣವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಭಾಷೆಆಯ್ಕೆ ವ್ಯವಸ್ಥೆಯನ್ನುIVR
(Interactive Voice Response) ಪರಿಚಯಿಸಲಾಗಿದ್ದು, ಈ ವ್ಯವಸ್ಥೆಯು ವಂಚನೆಗೊಳಗಾದ ದೂರುದಾರರ ಸಂವಹನಕ್ಕಾಗಿ ಕನ್ನಡ, ಇಂಗ್ಲೀಷ್‌ ಅಥವಾ ಹಿಂದಿ ಭಾಷೆಯನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ವಂಚನೆಗೊಳಗಾದ ದೂರುದಾರರು 1930 ಸಹಾಯವಾಣಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸುವ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತರಾಗಿದ್ದರೆ, ಈ ಸಮಯದಲ್ಲಿ ಐವಿಆರ್ ಮೂಲಕ ದೂರುದಾರರ Queue Position ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ. ಹÀಣಕಾಸೇತರ ಸಂಬಂಧಿತ ದೂರುಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವ ಬಗೆಗಿನ ಮಾಹಿತಿಯ ಲಿಂಕ್ ಅನ್ನು ಎಸ್‍ಎಂಎಸ್ ಮುಖಾಂತರ ದೂರುದಾರರಿಗೆ ನೀಡಲಾಗುವುದು. ವಂಚನೆಗೊಳಗಾದವರು ಮತ್ತು ವಂಚಕರ ಬಗೆಗಿನ ಮಾಹಿತಿಯನ್ನು ಸಹ ಸಂಗ್ರಹಿಸಿ, ಶೇಖರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಮಾಹಿತಿಯಿಂದ ತನಿಖಾಧಿಕಾರಿಗಳು ಆರೋಪಿಯ ಬಗ್ಗೆ ಹಾಗೂ ವಂಚನೆಗಳ ಬಗ್ಗೆ ವಿಶ್ಲೇಷಿತ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.
ಸೈಬರ್ ಕ್ರೈಂ ಸಹಾಯವಾಣಿ-1930 ವನ್ನು ಮಾನ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಸ್. ಮುರುಗನ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸುಧಾರಿತ ಸಾಫ್ಟ್‍ವೇರ್ ಹಾಗೂ ಮೂಲ ಸೌಕರ್ಯದೊಂದಿಗೆ ಅಂದಾಜು ವೆಚ್ಚ 1 ಕೋಟಿ ರೂ.ಗಳಲ್ಲಿ ಉನ್ನತೀಕರಿಸಲಾಗಿದ್ದು, ಇದರಿಂದ ಹಣಕಾಸು ವಂಚನೆಗೊಳಗಾದ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವುದಾಗಿದೆ. 1930 ಸಹಾಯವಾಣಿಯು ಸೈಬರ್ ಅಪರಾಧಗಳಿಗೆ ಒಳಗಾದ ನಾಗರೀಕರಿಗೆ ದಿನದ 24 ಗಂಟೆಗಳ ಕಾಲವೂ ಉತ್ತಮ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ, ಆಡಳಿತ ವಿಭಾಗದ ಎಡಿಜಿಪಿ ಸೌಮೆಂದು ಮುಖರ್ಜಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಜಿಡಿಪಿ ನಂಜುಂಡಸ್ವಾಮಿ ಹಾಗೂ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles