22.8 C
Karnataka
Sunday, June 15, 2025

ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ -ಕೆ.ವಿ.ಪ್ರಭಾಕರ್

ಬೆಳ್ತಂಗಡಿ:ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.
ತಾಲೂಕಿನ ಕುತ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ಸನಿಹದ ಮಂಜುಶ್ರೀ ಸಭಾಭನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಸ್ಥಳೀಯರ ಸಹಭಾಗಿತ್ವದ ಅಗತ್ಯವಿದೆ.ಹೀಗಾಗಿ ಸರಕಾರಿ ಶಾಲೆಗಳನ್ನು ಕಡೆಗೆಣಿಸಬಾರದು ಎಂದರು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಎಸ್.ಕೆ.ಡಿ.ಆರ್.ಡಿ.ಪಿ.ಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್. ಪ್ರಬಂಧಕ ಹರೀಶ್, ಕ್ವಾಯರ್ ಬೋರ್ಡ್ ಅಧ್ಯಕ್ಷ ನಟರಾಜ್, ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಸದಸ್ಯ ರಾಜೇಶ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ರೈ, ನಾರಾವಿ ಗ್ರಾ.ಪಂ.ಅಧ್ಯಕ್ಷ ರಾಜರತ್ನ ಜೈನ್, ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ ಉಮಾಕಾಂತ ಅರಿಗ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಹಿರಿಯರಾದ ಡಾಕಯ್ಯ ಪೂಜಾರಿ, ಗುತ್ತಿಗೆದಾರ ವಿನಯಕುಮಾರ್, ಉಪಾಧ್ಯಕ್ಷೆ ಶ್ವೇತಾ ಇದ್ದರು. ಕಾಮಗಾರಿಗಳನ್ನು ನಿರ್ವಹಿದವನ್ನು ಸಮ್ಮಾನಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ರೂಪಾ ವಂದಿಸಿದರು. ಶಿಕ್ಷಕ ಅಜಿತ್‌ಕುಮಾರ್ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಅವರು ಶಾಲಾ ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಶಾಲಾ ಫಲಕ, ಕೊಳವೆ ಬಾವಿ, ಚಿತ್ರಗಳುಳ್ಳ ಶಾಲಾ ಕೊಠಡಿ, ವಿದ್ಯುದೀಕರಣ, ಶೌಚಾಲಯ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಕಂಪ್ಯೂಟರ್ ‌ನ್ನು ಕೆ.ವಿ.ಪ್ರಭಾಕರ ಅವರು ಉದ್ಘಾಟಿಸಿದರು. ಶಾಲಾ ಆವರಣದಲ್ಲಿ ಗಿಡ ನೆಟ್ಟು ಶಾಲೆಯ ತರಕಾರಿ, ಅಡಕೆ ತೋಟವನ್ನು ವೀಕ್ಷಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles