25.1 C
Karnataka
Friday, April 18, 2025

ಜ.26ರಂದು ಜಿಲ್ಲಾಮಟ್ಟದ ಗಣರಾಜ್ಯೋತ್ಸವ

ಮಂಗಳೂರು:ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜ.26ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.
ಕಾರ್ಯಕ್ರಮದ ವಿವರ:
ಬೆಳಿಗ್ಗೆ 8.45 ಗಂಟೆಗೆ ನೆಹರೂ ಮೈದಾನದಲ್ಲಿ ಸಮಾವೇಶ, 8.55ಕ್ಕೆ ಗಣ್ಯರ ಆಗಮನ, 9 ಗಂಟೆಗೆ ಆರೋಗ್ಯ ಮತ್ತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಧ್ವಜಾರೋಹಣ ಮತ್ತು ರಾಷ್ಟ್ರಗೀತೆ (ಪೋಲಿಸ್ ಬ್ಯಾಂಡಿನಲ್ಲಿ). ನಂತರ 9.15 ಗಂಟೆಗೆ ಸಚಿವರು ಗಣರಾಜ್ಯೋತ್ಸವ ಸಂದೇಶ. 9.30ಕ್ಕೆ ಪಥಸಂಚಲನ ಪೆರೇಡ್ ವಿಸರ್ಜನೆ ಹಾಗೂ 10 ಗಂಟೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನೆರವೇರಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles