ಮಂಗಳೂರು : ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.
ಮಾರ್ಚ್ ತಿಂಗಳಲ್ಲಿ ಒಟ್ಟು 109562 ಅರ್ಜಿಗಳು ಸಕಾಲ ಮಿಷನ್ ಅಡಿಯಲ್ಲಿ ವಿಲೇವಾರಿಯಾಗಿದೆ. 3583 ಅರ್ಜಿಗಳು ತಿರಸ್ಕೃತಗೊಂಡಿದೆ. ಶೇ. 96 ರಷ್ಟು ಅರ್ಜಿಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
