25.6 C
Karnataka
Monday, May 18, 2026

ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ ೨೦೨೫-೨೬ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.
ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ. ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್) , ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್(ಕಲೈಂಜರ್ ಟಿ.ವಿ.) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ ೧೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ ೨೪ ರಂದು ಬೆಳಗ್ಗೆ ೧೧ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles