ಮಂಗಳೂರು : ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಕಾಮಗಾರಿಯಿಂದ ಹಾನಿಯಾದ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಮೇ 28 ರಿಂದ ಜೂನ್ 10 ರವರೆಗೆ ಕುಂಪಲ ಬೈಪಾಸ್ ಮುಖ್ಯ ರಸ್ತೆಯಿಂದ ಕುಂಪಲ ಶಾಲೆಯವರೆಗಿನ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ.
ಸಾರ್ವಜನಿಕರು ಪರ್ಯಾಯ ಮಾರ್ಗವಾಗಿ ದೇರಳಕಟ್ಟೆ ,ಯೆನಪೆÇೀಯ , ಕೊಲ್ಯ ಕನೀರ್ ತೋಟ ರಸ್ತೆಯನ್ನು ಉಪಯೋಗಿಸಲು ಸೂಚಿಸಲಾಗಿದೆ ಎಂದು ಸೋಮೇಶ್ವರ ಪುರಸಭೆ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
