ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ National Pension Scheme for the Traders and self Employed
Persons (NPS-Traders) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ಜನವರಿ 15 ರಿಂದ ಮಾರ್ಚ್ 15 ರವರೆಗೆ ವಿಶೇóಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55 ನಿಂದ ರೂ. 200 ವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಸದರಿ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ನಿಶ್ಚಿತ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
ಸದರಿ ಯೋಜನೆಯಡಿ ನರೇಗಾ ಕಾರ್ಮಿಕರು, sಸ್ವಸಹಾಯ ಸಂಘಗಳ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಯೆಯ್ಯಾಡಿ, ಮಂಗಳೂರು ಅಥವಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


