ಮಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ಉಪನೋಂದಣಾಧಿಕಾರಿಗಳ ಕಛೇರಿಯು 2ನೇ ಮತ್ತು 4ನೇ ಶನಿವಾರ ಮತ್ತು ಎಲ್ಲಾ ಭಾನುವಾರಗಳು ಕಾರ್ಯ ನಿರ್ವಹಿಸಲು ಆದೇಶ ಹೊರಡಿಸಲಾಗಿರುತ್ತದೆ. ರಜಾದಿನಗಳಂದು ಕಛೇರಿ ತೆರೆದಿರುವ ಬಗ್ಗೆ ಉಪನೋಂದಣಿ ಕಛೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.
ಆದ್ದರಿಂದ ಸಾರ್ವಜನಿಕರು ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
