ಮಂಗಳೂರು : ದ.ಕ ಜಿಲ್ಲೆಯ ಪ್ರವರ್ಗ ‘ಸಿ’ ವರ್ಗದ ದೇವಸ್ಥಾನಗಳಿಗೆ 9 ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರವರ್ಗ ಬಿ
ಪಡುಪೆರಾರ ಇಷ್ಟ ದೇವತಾ ಬಲವಂಡಿ ದೇವಸ್ಥಾನ, ಬೋಳಾರ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ, ಕೋಟೆಕಾರು ಶ್ರೀ ಮಲಿಯಾಳಿ ಚಾಮುಂಡಿ ದೈವಸ್ಥಾನ, ಹರಿಹರಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನ.
ಪ್ರವರ್ಗ ಸಿ
ಮೂಡಬಿದ್ರೆ ತಾಲೂಕಿನ ಹೊಸಬೆಟ್ಟು ಶ್ರೀ ಕೊಡಮಂತಾಯ ದೈವಸ್ಥಾನ, ಬೆಳ್ತಂಗಡಿ ತಾಲೂಕಿನ ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನ, ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ.
ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 10 ರಂದು 5.30 ರೊಳಗಾಗಿ ಪಡೀಲ್ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಲಭ್ಯವಿರುತ್ತದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
